July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಟೀಮ್ ಬಿಲ್ಡಿಂಗ್ ಮತ್ತು ಮಾನವೀಯ ಸಂಬಂಧಗಳು ಎಂಬ ವಿಷಯದ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು.

ಜೆಸಿಐ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಸುರತ್ಕಲ್ ಘಟಕದ ಸ್ಮಿತಾ ಐತಾಳ್ ಹಾಗೂ ಜೆಸಿಐ ಬಂಟ್ವಾಳ ಘಟಕದ ಆಶಾಮಣಿ ಯವರು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್ ಹಾಗೂ ಉಪಾಧ್ಯಕ್ಷರಾದ ಆಶಾ ಪ್ರಶಾಂತ್ ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಿದರು. ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ, ರಾಷ್ಟ್ರೀಯ ತರಬೇತುದಾರರಾಗಿರುವ ರಾಕೇಶ್ ಹೊಸಬೆಟ್ಟು, ಜೆಸಿಐ ಬಂಟ್ವಾಳದ ಪೂರ್ವ ಅಧ್ಯಕ್ಷರಾದ ಅಡ್ವಾಕೇಟ್ ದಯಾನಂದ ರೈ, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಹಾಗೂ ಸದಸ್ಯರಾದ ವಿನಾಯಕ್ ಉಪಸ್ಥಿತರಿದ್ದರು.


ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿಗಳಾದ ಅನುದೀಪ್ ಜೈನ್ ಹಾಗೂ ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕುಮಾರ್ ಕೆ ಯವರು ವಾಚಿಸಿದರು. ಕಾರ್ಯದರ್ಶಿಗಳ ಧನ್ಯವಾದವಿತ್ತರು.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!