33.4 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya
error: Content is protected !!