September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಕಬ್ಸ್, ಬುಲ್ ಬುಲ್, ಸೌಟ್ಸ್, ಗೈಡ್ಸ್, ರೋವರ್ಸ್‌ ಮತ್ತು ರೇಂಜರ್ಸ್ ವಿಭಾಗಗಳ ಎರಡು ದಿನದ ತರಬೇತಿ ಶಿಬಿರದ ಉದ್ಘಾಟನೆಯು ಜರುಗಿತು.


ಶಿಬಿರದ ಉದ್ಘಾಟನೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ನೆರವೇರಿಸಿ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಜಾಲಿ ಓ ಎ ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ನಿರಂಜನ್, ಸ್ಕೌಟ್ ಮಾಸ್ಟರ್ ಹಾಗೂ ಶ್ರೀಮತಿ ಸೇವಂತಿ ಬಿ, ಫ್ಲಾಕ್ ಲೀಡರ್ ಮುಖ್ಯ ತರಬೇತುದಾರರಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ನಿವೃತ್ತ ಮುಖ್ಯ ಶಿಕ್ಷಕರು, ಪ್ರಗತಿಪರ ಕೃಷಿಕರು ಮುಂತಾದ ಹಲವು ರಂಗಗಳಲ್ಲಿ ಗುರುತಿಸಿಕೊಂಡಿರುವ ಗಜಾನನ ವಝೆಯವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಮತಿ, ಸರಸ್ವತಿ ಪ್ರಾಥಮಿಕ ಶಾಲೆಯ ಸಂಯೋಜಕಿ ಶ್ರೀಮತಿ ಶ್ರೀಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಹಿರಿಯ ರೋವರ್ಸ್ ಮತ್ತು ರೇಂಜರ್ಸ್ ಗಳು ತರಬೇತಿಯಲ್ಲಿ ಸಹಕರಿಸಿದರು.


ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಲೀಡರ್ ಶ್ರೀಮತಿ ವಸಂತಿ ನಿರೂಪಿಸಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಸ್ವಾಗತಿಸಿ, ಕಬ್ ಮಾಸ್ಟರ್ ಶ್ರೀಮತಿ ಪ್ರೇಮ ಧನ್ಯವಾದಗೈದರು.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya
error: Content is protected !!