25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಇದರಲ್ಲಿ ಪುರುಷರ ವಿಭಾಗದ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಇವರು ಈವರೆಗೆ ಅನೇಕ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಚಿನ್ನದ ಹಾಗೂ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ಹಾಗೂ ಕಳೆದ ಜೂನ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಯೂತ್ ಮೀಟ್ ನಲ್ಲಿ ಕೂಡ ಚಿನ್ನದ ಪದಕವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದರು.ಇವರು ಮುಂಡಾಜೆ ನಿವಾಸಿಯಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುತ್ತಾರೆ. ಇವರು ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿ ಆಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!