25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಟೀಮ್ ಬಿಲ್ಡಿಂಗ್ ಮತ್ತು ಮಾನವೀಯ ಸಂಬಂಧಗಳು ಎಂಬ ವಿಷಯದ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು.

ಜೆಸಿಐ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಸುರತ್ಕಲ್ ಘಟಕದ ಸ್ಮಿತಾ ಐತಾಳ್ ಹಾಗೂ ಜೆಸಿಐ ಬಂಟ್ವಾಳ ಘಟಕದ ಆಶಾಮಣಿ ಯವರು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್ ಹಾಗೂ ಉಪಾಧ್ಯಕ್ಷರಾದ ಆಶಾ ಪ್ರಶಾಂತ್ ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಿದರು. ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ, ರಾಷ್ಟ್ರೀಯ ತರಬೇತುದಾರರಾಗಿರುವ ರಾಕೇಶ್ ಹೊಸಬೆಟ್ಟು, ಜೆಸಿಐ ಬಂಟ್ವಾಳದ ಪೂರ್ವ ಅಧ್ಯಕ್ಷರಾದ ಅಡ್ವಾಕೇಟ್ ದಯಾನಂದ ರೈ, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಹಾಗೂ ಸದಸ್ಯರಾದ ವಿನಾಯಕ್ ಉಪಸ್ಥಿತರಿದ್ದರು.


ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿಗಳಾದ ಅನುದೀಪ್ ಜೈನ್ ಹಾಗೂ ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕುಮಾರ್ ಕೆ ಯವರು ವಾಚಿಸಿದರು. ಕಾರ್ಯದರ್ಶಿಗಳ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!