30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿ ಅನಂತೋಡಿ ಬೆಳಾಲು ಇದರ ಮುಂದಾಳತ್ವದ್ಲಲಿ ಅ.4 ರಂದು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಠಾರದಲ್ಲಿ ಮಕ್ಕಳ ಭಜನಾ ತರಬೇತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಅರ್ಚಕರಾದ ಸಂಪತ್ ಕುಮಾರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಂತೇಶ್ವರ ಭಜನಾ ಮಂಡಳಿ ಅಧ್ಯಕ್ಷ ನವೀನ್ ಕಂಬಳದಡ್ಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ರವರು ಆಗಮಿಸಿ, ಸನಾತನ ಧಾರ್ಮಿಕ ಭಾವನೆಯನ್ನು ಪ್ರತಿ ಮನೆ-ಮನಗಳಲ್ಲೂ ಕಿರಿಯ ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ನಮ್ಮದೆಲ್ಲರದ್ದು ಆಗಿದೆ ಎಂದರು.

ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಮಾತನಾಡುತ್ತ ಧಾರ್ಮಿಕ ಭಾವನೆ ಮಕ್ಕಳಲ್ಲಿ ಮೂಡಿಸಿದಾಗ ಪ್ರತಿ ಮನೆಯಲ್ಲೂ ಭಕ್ತಿ ಭಾವನೆ ಬರಲು ಸಾಧ್ಯವಿದೆ ಎಂದರು. ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲತಾಣ ಪರಿಣಾಮದಿಂದ ಸಮಾಜದಲ್ಲಿ ಧಾರ್ಮಿಕತೆಗೆ ಧಕ್ಕೆ ಬರುತ್ತದೆ ಎಂದರು.,

ವೇದಿಕೆಯಲ್ಲಿ ಮಮತಾ ದಿನೇಶ್ ಪೂಜಾರಿ, ತರಬೇತಿ ಶಿಕ್ಷಕಿಯರಾದ ಸೌಮ್ಯರಾವ್, ಶ್ರೀನಿವಾಸ್ ಗೌಡ , ಗಣಪನಗುತ್ತು, ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಜಾರಪ್ಪ ಗೌಡ ಉಪಸ್ಥಿತರಿದ್ದರು.

65 ವಿದ್ಯಾರ್ಥಿಗಳಿಗೆ ಭಜನಾ ತರಬೇತಿಯನ್ನು ಸುಮಾರು 6 ತಿಂಗಳು ಕಾಲ ನೀಡಲು ಪೋಷಕರು ದೇವಸ್ಥಾನ ಸಮಿತಿ ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

ಗಿರೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಸತೀಶ್ ಎಳ್ಳುಗದ್ದೆ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಜಾರಪ್ಪ ಗೌಡ ಧನ್ಯವಾದವಿತ್ತರು.

Related posts

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya
error: Content is protected !!