26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿ ಅನಂತೋಡಿ ಬೆಳಾಲು ಇದರ ಮುಂದಾಳತ್ವದ್ಲಲಿ ಅ.4 ರಂದು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಠಾರದಲ್ಲಿ ಮಕ್ಕಳ ಭಜನಾ ತರಬೇತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಅರ್ಚಕರಾದ ಸಂಪತ್ ಕುಮಾರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಂತೇಶ್ವರ ಭಜನಾ ಮಂಡಳಿ ಅಧ್ಯಕ್ಷ ನವೀನ್ ಕಂಬಳದಡ್ಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ರವರು ಆಗಮಿಸಿ, ಸನಾತನ ಧಾರ್ಮಿಕ ಭಾವನೆಯನ್ನು ಪ್ರತಿ ಮನೆ-ಮನಗಳಲ್ಲೂ ಕಿರಿಯ ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ನಮ್ಮದೆಲ್ಲರದ್ದು ಆಗಿದೆ ಎಂದರು.

ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಮಾತನಾಡುತ್ತ ಧಾರ್ಮಿಕ ಭಾವನೆ ಮಕ್ಕಳಲ್ಲಿ ಮೂಡಿಸಿದಾಗ ಪ್ರತಿ ಮನೆಯಲ್ಲೂ ಭಕ್ತಿ ಭಾವನೆ ಬರಲು ಸಾಧ್ಯವಿದೆ ಎಂದರು. ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲತಾಣ ಪರಿಣಾಮದಿಂದ ಸಮಾಜದಲ್ಲಿ ಧಾರ್ಮಿಕತೆಗೆ ಧಕ್ಕೆ ಬರುತ್ತದೆ ಎಂದರು.,

ವೇದಿಕೆಯಲ್ಲಿ ಮಮತಾ ದಿನೇಶ್ ಪೂಜಾರಿ, ತರಬೇತಿ ಶಿಕ್ಷಕಿಯರಾದ ಸೌಮ್ಯರಾವ್, ಶ್ರೀನಿವಾಸ್ ಗೌಡ , ಗಣಪನಗುತ್ತು, ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಜಾರಪ್ಪ ಗೌಡ ಉಪಸ್ಥಿತರಿದ್ದರು.

65 ವಿದ್ಯಾರ್ಥಿಗಳಿಗೆ ಭಜನಾ ತರಬೇತಿಯನ್ನು ಸುಮಾರು 6 ತಿಂಗಳು ಕಾಲ ನೀಡಲು ಪೋಷಕರು ದೇವಸ್ಥಾನ ಸಮಿತಿ ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

ಗಿರೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಸತೀಶ್ ಎಳ್ಳುಗದ್ದೆ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಜಾರಪ್ಪ ಗೌಡ ಧನ್ಯವಾದವಿತ್ತರು.

Related posts

ಜೂ.4: ವಿದ್ಯುತ್ ನಿಲುಗಡೆ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya
error: Content is protected !!