July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿ ಅನಂತೋಡಿ ಬೆಳಾಲು ಇದರ ಮುಂದಾಳತ್ವದ್ಲಲಿ ಅ.4 ರಂದು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಠಾರದಲ್ಲಿ ಮಕ್ಕಳ ಭಜನಾ ತರಬೇತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಅರ್ಚಕರಾದ ಸಂಪತ್ ಕುಮಾರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಂತೇಶ್ವರ ಭಜನಾ ಮಂಡಳಿ ಅಧ್ಯಕ್ಷ ನವೀನ್ ಕಂಬಳದಡ್ಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ರವರು ಆಗಮಿಸಿ, ಸನಾತನ ಧಾರ್ಮಿಕ ಭಾವನೆಯನ್ನು ಪ್ರತಿ ಮನೆ-ಮನಗಳಲ್ಲೂ ಕಿರಿಯ ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ನಮ್ಮದೆಲ್ಲರದ್ದು ಆಗಿದೆ ಎಂದರು.

ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಮಾತನಾಡುತ್ತ ಧಾರ್ಮಿಕ ಭಾವನೆ ಮಕ್ಕಳಲ್ಲಿ ಮೂಡಿಸಿದಾಗ ಪ್ರತಿ ಮನೆಯಲ್ಲೂ ಭಕ್ತಿ ಭಾವನೆ ಬರಲು ಸಾಧ್ಯವಿದೆ ಎಂದರು. ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲತಾಣ ಪರಿಣಾಮದಿಂದ ಸಮಾಜದಲ್ಲಿ ಧಾರ್ಮಿಕತೆಗೆ ಧಕ್ಕೆ ಬರುತ್ತದೆ ಎಂದರು.,

ವೇದಿಕೆಯಲ್ಲಿ ಮಮತಾ ದಿನೇಶ್ ಪೂಜಾರಿ, ತರಬೇತಿ ಶಿಕ್ಷಕಿಯರಾದ ಸೌಮ್ಯರಾವ್, ಶ್ರೀನಿವಾಸ್ ಗೌಡ , ಗಣಪನಗುತ್ತು, ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಜಾರಪ್ಪ ಗೌಡ ಉಪಸ್ಥಿತರಿದ್ದರು.

65 ವಿದ್ಯಾರ್ಥಿಗಳಿಗೆ ಭಜನಾ ತರಬೇತಿಯನ್ನು ಸುಮಾರು 6 ತಿಂಗಳು ಕಾಲ ನೀಡಲು ಪೋಷಕರು ದೇವಸ್ಥಾನ ಸಮಿತಿ ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

ಗಿರೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಸತೀಶ್ ಎಳ್ಳುಗದ್ದೆ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಜಾರಪ್ಪ ಗೌಡ ಧನ್ಯವಾದವಿತ್ತರು.

Related posts

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya
error: Content is protected !!