26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿ ಅನಂತೋಡಿ ಬೆಳಾಲು ಇದರ ಮುಂದಾಳತ್ವದ್ಲಲಿ ಅ.4 ರಂದು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಠಾರದಲ್ಲಿ ಮಕ್ಕಳ ಭಜನಾ ತರಬೇತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಅರ್ಚಕರಾದ ಸಂಪತ್ ಕುಮಾರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಂತೇಶ್ವರ ಭಜನಾ ಮಂಡಳಿ ಅಧ್ಯಕ್ಷ ನವೀನ್ ಕಂಬಳದಡ್ಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ರವರು ಆಗಮಿಸಿ, ಸನಾತನ ಧಾರ್ಮಿಕ ಭಾವನೆಯನ್ನು ಪ್ರತಿ ಮನೆ-ಮನಗಳಲ್ಲೂ ಕಿರಿಯ ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ನಮ್ಮದೆಲ್ಲರದ್ದು ಆಗಿದೆ ಎಂದರು.

ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಮಾತನಾಡುತ್ತ ಧಾರ್ಮಿಕ ಭಾವನೆ ಮಕ್ಕಳಲ್ಲಿ ಮೂಡಿಸಿದಾಗ ಪ್ರತಿ ಮನೆಯಲ್ಲೂ ಭಕ್ತಿ ಭಾವನೆ ಬರಲು ಸಾಧ್ಯವಿದೆ ಎಂದರು. ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲತಾಣ ಪರಿಣಾಮದಿಂದ ಸಮಾಜದಲ್ಲಿ ಧಾರ್ಮಿಕತೆಗೆ ಧಕ್ಕೆ ಬರುತ್ತದೆ ಎಂದರು.,

ವೇದಿಕೆಯಲ್ಲಿ ಮಮತಾ ದಿನೇಶ್ ಪೂಜಾರಿ, ತರಬೇತಿ ಶಿಕ್ಷಕಿಯರಾದ ಸೌಮ್ಯರಾವ್, ಶ್ರೀನಿವಾಸ್ ಗೌಡ , ಗಣಪನಗುತ್ತು, ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಜಾರಪ್ಪ ಗೌಡ ಉಪಸ್ಥಿತರಿದ್ದರು.

65 ವಿದ್ಯಾರ್ಥಿಗಳಿಗೆ ಭಜನಾ ತರಬೇತಿಯನ್ನು ಸುಮಾರು 6 ತಿಂಗಳು ಕಾಲ ನೀಡಲು ಪೋಷಕರು ದೇವಸ್ಥಾನ ಸಮಿತಿ ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

ಗಿರೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಸತೀಶ್ ಎಳ್ಳುಗದ್ದೆ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಜಾರಪ್ಪ ಗೌಡ ಧನ್ಯವಾದವಿತ್ತರು.

Related posts

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!