30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿ ಅನಂತೋಡಿ ಬೆಳಾಲು ಇದರ ಮುಂದಾಳತ್ವದ್ಲಲಿ ಅ.4 ರಂದು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಠಾರದಲ್ಲಿ ಮಕ್ಕಳ ಭಜನಾ ತರಬೇತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಅರ್ಚಕರಾದ ಸಂಪತ್ ಕುಮಾರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಂತೇಶ್ವರ ಭಜನಾ ಮಂಡಳಿ ಅಧ್ಯಕ್ಷ ನವೀನ್ ಕಂಬಳದಡ್ಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ರವರು ಆಗಮಿಸಿ, ಸನಾತನ ಧಾರ್ಮಿಕ ಭಾವನೆಯನ್ನು ಪ್ರತಿ ಮನೆ-ಮನಗಳಲ್ಲೂ ಕಿರಿಯ ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ನಮ್ಮದೆಲ್ಲರದ್ದು ಆಗಿದೆ ಎಂದರು.

ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಮಾತನಾಡುತ್ತ ಧಾರ್ಮಿಕ ಭಾವನೆ ಮಕ್ಕಳಲ್ಲಿ ಮೂಡಿಸಿದಾಗ ಪ್ರತಿ ಮನೆಯಲ್ಲೂ ಭಕ್ತಿ ಭಾವನೆ ಬರಲು ಸಾಧ್ಯವಿದೆ ಎಂದರು. ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲತಾಣ ಪರಿಣಾಮದಿಂದ ಸಮಾಜದಲ್ಲಿ ಧಾರ್ಮಿಕತೆಗೆ ಧಕ್ಕೆ ಬರುತ್ತದೆ ಎಂದರು.,

ವೇದಿಕೆಯಲ್ಲಿ ಮಮತಾ ದಿನೇಶ್ ಪೂಜಾರಿ, ತರಬೇತಿ ಶಿಕ್ಷಕಿಯರಾದ ಸೌಮ್ಯರಾವ್, ಶ್ರೀನಿವಾಸ್ ಗೌಡ , ಗಣಪನಗುತ್ತು, ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಜಾರಪ್ಪ ಗೌಡ ಉಪಸ್ಥಿತರಿದ್ದರು.

65 ವಿದ್ಯಾರ್ಥಿಗಳಿಗೆ ಭಜನಾ ತರಬೇತಿಯನ್ನು ಸುಮಾರು 6 ತಿಂಗಳು ಕಾಲ ನೀಡಲು ಪೋಷಕರು ದೇವಸ್ಥಾನ ಸಮಿತಿ ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

ಗಿರೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಸತೀಶ್ ಎಳ್ಳುಗದ್ದೆ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಜಾರಪ್ಪ ಗೌಡ ಧನ್ಯವಾದವಿತ್ತರು.

Related posts

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!