September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಇದರಲ್ಲಿ ಪುರುಷರ ವಿಭಾಗದ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಇವರು ಈವರೆಗೆ ಅನೇಕ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಚಿನ್ನದ ಹಾಗೂ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ಹಾಗೂ ಕಳೆದ ಜೂನ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಯೂತ್ ಮೀಟ್ ನಲ್ಲಿ ಕೂಡ ಚಿನ್ನದ ಪದಕವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದರು.ಇವರು ಮುಂಡಾಜೆ ನಿವಾಸಿಯಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುತ್ತಾರೆ. ಇವರು ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿ ಆಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya
error: Content is protected !!