July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಇದರಲ್ಲಿ ಪುರುಷರ ವಿಭಾಗದ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಇವರು ಈವರೆಗೆ ಅನೇಕ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಚಿನ್ನದ ಹಾಗೂ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ಹಾಗೂ ಕಳೆದ ಜೂನ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಯೂತ್ ಮೀಟ್ ನಲ್ಲಿ ಕೂಡ ಚಿನ್ನದ ಪದಕವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದರು.ಇವರು ಮುಂಡಾಜೆ ನಿವಾಸಿಯಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುತ್ತಾರೆ. ಇವರು ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿ ಆಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya
error: Content is protected !!