ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಟೀಮ್ ಬಿಲ್ಡಿಂಗ್ ಮತ್ತು ಮಾನವೀಯ ಸಂಬಂಧಗಳು ಎಂಬ ವಿಷಯದ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು.

ಜೆಸಿಐ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಸುರತ್ಕಲ್ ಘಟಕದ ಸ್ಮಿತಾ ಐತಾಳ್ ಹಾಗೂ ಜೆಸಿಐ ಬಂಟ್ವಾಳ ಘಟಕದ ಆಶಾಮಣಿ ಯವರು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್ ಹಾಗೂ ಉಪಾಧ್ಯಕ್ಷರಾದ ಆಶಾ ಪ್ರಶಾಂತ್ ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಿದರು. ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ, ರಾಷ್ಟ್ರೀಯ ತರಬೇತುದಾರರಾಗಿರುವ ರಾಕೇಶ್ ಹೊಸಬೆಟ್ಟು, ಜೆಸಿಐ ಬಂಟ್ವಾಳದ ಪೂರ್ವ ಅಧ್ಯಕ್ಷರಾದ ಅಡ್ವಾಕೇಟ್ ದಯಾನಂದ ರೈ, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಹಾಗೂ ಸದಸ್ಯರಾದ ವಿನಾಯಕ್ ಉಪಸ್ಥಿತರಿದ್ದರು.


ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿಗಳಾದ ಅನುದೀಪ್ ಜೈನ್ ಹಾಗೂ ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕುಮಾರ್ ಕೆ ಯವರು ವಾಚಿಸಿದರು. ಕಾರ್ಯದರ್ಶಿಗಳ ಧನ್ಯವಾದವಿತ್ತರು.

Related posts

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya
error: Content is protected !!