26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಟೀಮ್ ಬಿಲ್ಡಿಂಗ್ ಮತ್ತು ಮಾನವೀಯ ಸಂಬಂಧಗಳು ಎಂಬ ವಿಷಯದ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು.

ಜೆಸಿಐ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಸುರತ್ಕಲ್ ಘಟಕದ ಸ್ಮಿತಾ ಐತಾಳ್ ಹಾಗೂ ಜೆಸಿಐ ಬಂಟ್ವಾಳ ಘಟಕದ ಆಶಾಮಣಿ ಯವರು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್ ಹಾಗೂ ಉಪಾಧ್ಯಕ್ಷರಾದ ಆಶಾ ಪ್ರಶಾಂತ್ ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಿದರು. ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ, ರಾಷ್ಟ್ರೀಯ ತರಬೇತುದಾರರಾಗಿರುವ ರಾಕೇಶ್ ಹೊಸಬೆಟ್ಟು, ಜೆಸಿಐ ಬಂಟ್ವಾಳದ ಪೂರ್ವ ಅಧ್ಯಕ್ಷರಾದ ಅಡ್ವಾಕೇಟ್ ದಯಾನಂದ ರೈ, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಹಾಗೂ ಸದಸ್ಯರಾದ ವಿನಾಯಕ್ ಉಪಸ್ಥಿತರಿದ್ದರು.


ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿಗಳಾದ ಅನುದೀಪ್ ಜೈನ್ ಹಾಗೂ ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕುಮಾರ್ ಕೆ ಯವರು ವಾಚಿಸಿದರು. ಕಾರ್ಯದರ್ಶಿಗಳ ಧನ್ಯವಾದವಿತ್ತರು.

Related posts

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya
error: Content is protected !!