32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!