22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಕಬ್ಸ್, ಬುಲ್ ಬುಲ್, ಸೌಟ್ಸ್, ಗೈಡ್ಸ್, ರೋವರ್ಸ್‌ ಮತ್ತು ರೇಂಜರ್ಸ್ ವಿಭಾಗಗಳ ಎರಡು ದಿನದ ತರಬೇತಿ ಶಿಬಿರದ ಉದ್ಘಾಟನೆಯು ಜರುಗಿತು.


ಶಿಬಿರದ ಉದ್ಘಾಟನೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ನೆರವೇರಿಸಿ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಜಾಲಿ ಓ ಎ ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ನಿರಂಜನ್, ಸ್ಕೌಟ್ ಮಾಸ್ಟರ್ ಹಾಗೂ ಶ್ರೀಮತಿ ಸೇವಂತಿ ಬಿ, ಫ್ಲಾಕ್ ಲೀಡರ್ ಮುಖ್ಯ ತರಬೇತುದಾರರಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ನಿವೃತ್ತ ಮುಖ್ಯ ಶಿಕ್ಷಕರು, ಪ್ರಗತಿಪರ ಕೃಷಿಕರು ಮುಂತಾದ ಹಲವು ರಂಗಗಳಲ್ಲಿ ಗುರುತಿಸಿಕೊಂಡಿರುವ ಗಜಾನನ ವಝೆಯವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಮತಿ, ಸರಸ್ವತಿ ಪ್ರಾಥಮಿಕ ಶಾಲೆಯ ಸಂಯೋಜಕಿ ಶ್ರೀಮತಿ ಶ್ರೀಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಹಿರಿಯ ರೋವರ್ಸ್ ಮತ್ತು ರೇಂಜರ್ಸ್ ಗಳು ತರಬೇತಿಯಲ್ಲಿ ಸಹಕರಿಸಿದರು.


ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಲೀಡರ್ ಶ್ರೀಮತಿ ವಸಂತಿ ನಿರೂಪಿಸಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಸ್ವಾಗತಿಸಿ, ಕಬ್ ಮಾಸ್ಟರ್ ಶ್ರೀಮತಿ ಪ್ರೇಮ ಧನ್ಯವಾದಗೈದರು.

Related posts

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya
error: Content is protected !!