September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಇದರಲ್ಲಿ ಪುರುಷರ ವಿಭಾಗದ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಇವರು ಈವರೆಗೆ ಅನೇಕ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಚಿನ್ನದ ಹಾಗೂ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ಹಾಗೂ ಕಳೆದ ಜೂನ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಯೂತ್ ಮೀಟ್ ನಲ್ಲಿ ಕೂಡ ಚಿನ್ನದ ಪದಕವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದರು.ಇವರು ಮುಂಡಾಜೆ ನಿವಾಸಿಯಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುತ್ತಾರೆ. ಇವರು ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿ ಆಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!