23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಇದರಲ್ಲಿ ಪುರುಷರ ವಿಭಾಗದ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಇವರು ಈವರೆಗೆ ಅನೇಕ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಚಿನ್ನದ ಹಾಗೂ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ಹಾಗೂ ಕಳೆದ ಜೂನ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಯೂತ್ ಮೀಟ್ ನಲ್ಲಿ ಕೂಡ ಚಿನ್ನದ ಪದಕವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದರು.ಇವರು ಮುಂಡಾಜೆ ನಿವಾಸಿಯಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುತ್ತಾರೆ. ಇವರು ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿ ಆಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya
error: Content is protected !!