July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಇದರಲ್ಲಿ ಪುರುಷರ ವಿಭಾಗದ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಇವರು ಈವರೆಗೆ ಅನೇಕ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಚಿನ್ನದ ಹಾಗೂ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ಹಾಗೂ ಕಳೆದ ಜೂನ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಯೂತ್ ಮೀಟ್ ನಲ್ಲಿ ಕೂಡ ಚಿನ್ನದ ಪದಕವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದರು.ಇವರು ಮುಂಡಾಜೆ ನಿವಾಸಿಯಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುತ್ತಾರೆ. ಇವರು ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿ ಆಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ

Related posts

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya
error: Content is protected !!