23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

ಗೋವಾ :ಗೋವಾ ರಾಜ್ಯದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭ ಅಕ್ಟೋಬರ್ 20 ರಂದು ಗೋವಾ ರಾಜಧಾನಿ ಪಣಜಿಯಲ್ಲಿ ನಡೆಯಲಿದೆ. ತುಳು ಕೂಟ ಗೋವಾದ ಫೇಸ್ ಬುಕ್ ಪೇಜ್ ನ್ನು ಆರಂಭಿಸಲಾಗಿದ್ದು, ಇದಕ್ಕೆ ಪರ್ವರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಧೀಕೃತವಾಗಿ ಬಿಡುಗಡೆಗೊಳಿಸಲಾಯಿತು ಎಂದು ತುಳು ಕೂಟ ಗೋವಾದ ಅಧ್ಯಕ್ಷರಾದ ಇರ್ವತ್ತೂರು ಗಣೇಶ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಪರ್ವರಿಯಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ತುಳು ಕೂಟ ಗೋವಾದ ಸಮೀತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಕ್ಟೋಬರ್ 20 ರಂದು ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಿದ್ದೇವೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಪೂರ್ವ ಸಿದ್ಧತಾ ಕಾರ್ಯಗಳ ಕುರಿತು ಚರ್ಚೆ ನಡೆಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಸಾಂಸ್ಕಂತಿಕ ಕಾರ್ಯಕ್ರಮವನ್ನೂ ಆಯೋಜಿಸಲಾಗುವುದು ಎಂದು ಗಣೇಶ ಶೆಟ್ಟಿ ಇರ್ವತ್ತೂರು ಮಾಹಿತಿ ನೀಡಿದರು.

ಈ ಸಭೆಯಲ್ಲಿ ತುಳು ಕೂಟ ಗೋವಾದ ಗೌರವಾಧ್ಯಕ್ಷ ಚಂದ್ರಹಾಸ ಅಮಿನ್, ಅಧ್ಯಕ್ಷರಾದ ಗಣೇಶ ಶೆಟ್ಟಿ ಇರ್ವತ್ತೂರು, ಉಪಾಧ್ಯಕ್ಷ ನಾಗೇಶ್ ಪೂಜಾರಿ. ಕಾರ್ಯದರ್ಶಿ ಶಶಿಧರ್ ನಾಯಕ್, ಪ್ರಶಾಂತ್ ಜೈನ್ , ಉಪಾಧ್ಯಕ್ಷ ಶಶಿಧರ ರೈ, ಜಗದೀಶ ಶೆಟ್ಟಿ, ಪ್ರಕಾಶ್ ಪೂಜಾರಿ , ರೇವತಿ ಅಮಿನ್, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿದ್ದರು

Related posts

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya
error: Content is protected !!