September 6, 2026
Uncategorized

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

ಗೋವಾ :ಗೋವಾ ರಾಜ್ಯದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭ ಅಕ್ಟೋಬರ್ 20 ರಂದು ಗೋವಾ ರಾಜಧಾನಿ ಪಣಜಿಯಲ್ಲಿ ನಡೆಯಲಿದೆ. ತುಳು ಕೂಟ ಗೋವಾದ ಫೇಸ್ ಬುಕ್ ಪೇಜ್ ನ್ನು ಆರಂಭಿಸಲಾಗಿದ್ದು, ಇದಕ್ಕೆ ಪರ್ವರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಧೀಕೃತವಾಗಿ ಬಿಡುಗಡೆಗೊಳಿಸಲಾಯಿತು ಎಂದು ತುಳು ಕೂಟ ಗೋವಾದ ಅಧ್ಯಕ್ಷರಾದ ಇರ್ವತ್ತೂರು ಗಣೇಶ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಪರ್ವರಿಯಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ತುಳು ಕೂಟ ಗೋವಾದ ಸಮೀತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಕ್ಟೋಬರ್ 20 ರಂದು ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಿದ್ದೇವೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಪೂರ್ವ ಸಿದ್ಧತಾ ಕಾರ್ಯಗಳ ಕುರಿತು ಚರ್ಚೆ ನಡೆಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಸಾಂಸ್ಕಂತಿಕ ಕಾರ್ಯಕ್ರಮವನ್ನೂ ಆಯೋಜಿಸಲಾಗುವುದು ಎಂದು ಗಣೇಶ ಶೆಟ್ಟಿ ಇರ್ವತ್ತೂರು ಮಾಹಿತಿ ನೀಡಿದರು.

ಈ ಸಭೆಯಲ್ಲಿ ತುಳು ಕೂಟ ಗೋವಾದ ಗೌರವಾಧ್ಯಕ್ಷ ಚಂದ್ರಹಾಸ ಅಮಿನ್, ಅಧ್ಯಕ್ಷರಾದ ಗಣೇಶ ಶೆಟ್ಟಿ ಇರ್ವತ್ತೂರು, ಉಪಾಧ್ಯಕ್ಷ ನಾಗೇಶ್ ಪೂಜಾರಿ. ಕಾರ್ಯದರ್ಶಿ ಶಶಿಧರ್ ನಾಯಕ್, ಪ್ರಶಾಂತ್ ಜೈನ್ , ಉಪಾಧ್ಯಕ್ಷ ಶಶಿಧರ ರೈ, ಜಗದೀಶ ಶೆಟ್ಟಿ, ಪ್ರಕಾಶ್ ಪೂಜಾರಿ , ರೇವತಿ ಅಮಿನ್, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿದ್ದರು

Related posts

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!