35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!