March 7, 2026
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya
error: Content is protected !!