25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya
error: Content is protected !!