ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya
error: Content is protected !!