25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya
error: Content is protected !!