25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya
error: Content is protected !!