26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!