25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!