23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!