22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

ಗೋವಾ :ಗೋವಾ ರಾಜ್ಯದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭ ಅಕ್ಟೋಬರ್ 20 ರಂದು ಗೋವಾ ರಾಜಧಾನಿ ಪಣಜಿಯಲ್ಲಿ ನಡೆಯಲಿದೆ. ತುಳು ಕೂಟ ಗೋವಾದ ಫೇಸ್ ಬುಕ್ ಪೇಜ್ ನ್ನು ಆರಂಭಿಸಲಾಗಿದ್ದು, ಇದಕ್ಕೆ ಪರ್ವರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಧೀಕೃತವಾಗಿ ಬಿಡುಗಡೆಗೊಳಿಸಲಾಯಿತು ಎಂದು ತುಳು ಕೂಟ ಗೋವಾದ ಅಧ್ಯಕ್ಷರಾದ ಇರ್ವತ್ತೂರು ಗಣೇಶ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಪರ್ವರಿಯಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ತುಳು ಕೂಟ ಗೋವಾದ ಸಮೀತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಕ್ಟೋಬರ್ 20 ರಂದು ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಿದ್ದೇವೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಪೂರ್ವ ಸಿದ್ಧತಾ ಕಾರ್ಯಗಳ ಕುರಿತು ಚರ್ಚೆ ನಡೆಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಸಾಂಸ್ಕಂತಿಕ ಕಾರ್ಯಕ್ರಮವನ್ನೂ ಆಯೋಜಿಸಲಾಗುವುದು ಎಂದು ಗಣೇಶ ಶೆಟ್ಟಿ ಇರ್ವತ್ತೂರು ಮಾಹಿತಿ ನೀಡಿದರು.

ಈ ಸಭೆಯಲ್ಲಿ ತುಳು ಕೂಟ ಗೋವಾದ ಗೌರವಾಧ್ಯಕ್ಷ ಚಂದ್ರಹಾಸ ಅಮಿನ್, ಅಧ್ಯಕ್ಷರಾದ ಗಣೇಶ ಶೆಟ್ಟಿ ಇರ್ವತ್ತೂರು, ಉಪಾಧ್ಯಕ್ಷ ನಾಗೇಶ್ ಪೂಜಾರಿ. ಕಾರ್ಯದರ್ಶಿ ಶಶಿಧರ್ ನಾಯಕ್, ಪ್ರಶಾಂತ್ ಜೈನ್ , ಉಪಾಧ್ಯಕ್ಷ ಶಶಿಧರ ರೈ, ಜಗದೀಶ ಶೆಟ್ಟಿ, ಪ್ರಕಾಶ್ ಪೂಜಾರಿ , ರೇವತಿ ಅಮಿನ್, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿದ್ದರು

Related posts

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್: ಈತನ 36 ವರ್ಷದ ಟ್ರಾವೆಲ್ ಹಿಸ್ಟರಿ ಮಾತ್ರ ಬಿಂದಾಸ್

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya
error: Content is protected !!