September 6, 2026
Uncategorized

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

ಗೋವಾ :ಗೋವಾ ರಾಜ್ಯದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭ ಅಕ್ಟೋಬರ್ 20 ರಂದು ಗೋವಾ ರಾಜಧಾನಿ ಪಣಜಿಯಲ್ಲಿ ನಡೆಯಲಿದೆ. ತುಳು ಕೂಟ ಗೋವಾದ ಫೇಸ್ ಬುಕ್ ಪೇಜ್ ನ್ನು ಆರಂಭಿಸಲಾಗಿದ್ದು, ಇದಕ್ಕೆ ಪರ್ವರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಧೀಕೃತವಾಗಿ ಬಿಡುಗಡೆಗೊಳಿಸಲಾಯಿತು ಎಂದು ತುಳು ಕೂಟ ಗೋವಾದ ಅಧ್ಯಕ್ಷರಾದ ಇರ್ವತ್ತೂರು ಗಣೇಶ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಪರ್ವರಿಯಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ತುಳು ಕೂಟ ಗೋವಾದ ಸಮೀತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಕ್ಟೋಬರ್ 20 ರಂದು ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಿದ್ದೇವೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಪೂರ್ವ ಸಿದ್ಧತಾ ಕಾರ್ಯಗಳ ಕುರಿತು ಚರ್ಚೆ ನಡೆಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಸಾಂಸ್ಕಂತಿಕ ಕಾರ್ಯಕ್ರಮವನ್ನೂ ಆಯೋಜಿಸಲಾಗುವುದು ಎಂದು ಗಣೇಶ ಶೆಟ್ಟಿ ಇರ್ವತ್ತೂರು ಮಾಹಿತಿ ನೀಡಿದರು.

ಈ ಸಭೆಯಲ್ಲಿ ತುಳು ಕೂಟ ಗೋವಾದ ಗೌರವಾಧ್ಯಕ್ಷ ಚಂದ್ರಹಾಸ ಅಮಿನ್, ಅಧ್ಯಕ್ಷರಾದ ಗಣೇಶ ಶೆಟ್ಟಿ ಇರ್ವತ್ತೂರು, ಉಪಾಧ್ಯಕ್ಷ ನಾಗೇಶ್ ಪೂಜಾರಿ. ಕಾರ್ಯದರ್ಶಿ ಶಶಿಧರ್ ನಾಯಕ್, ಪ್ರಶಾಂತ್ ಜೈನ್ , ಉಪಾಧ್ಯಕ್ಷ ಶಶಿಧರ ರೈ, ಜಗದೀಶ ಶೆಟ್ಟಿ, ಪ್ರಕಾಶ್ ಪೂಜಾರಿ , ರೇವತಿ ಅಮಿನ್, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿದ್ದರು

Related posts

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya
error: Content is protected !!