25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya
error: Content is protected !!