ಗ್ರಾಮಾಂತರ ಸುದ್ದಿ

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

ಬೆಳ್ತಂಗಡಿ; ಜಾನುವಾರು ಕಟ್ಟಿ ಹೋಗಿದ್ದಲ್ಲಿ ಅದರ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವೊಂದನ್ನು ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಕಾಲಿಕವಾಗಿ ಸ್ಪಂದಿಸಿ ರಕ್ಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಣಮಂಜ ಸ್ಥಳದ ರಸ್ತೆ ಬದಿಯಲ್ಲಿ ಯಾರೋ ಮೇಯಲು ಕಟ್ಟಿ ಹೋಗಿದ್ದ ಹಸು ವಿನ ಕುತ್ತಿಗೆಗೆ ಹಾಕಲಾಗಿದ್ದ ಹಗ್ಗ ಬಿಗಿಯಾಗಿ ಜಾನುವಾರು ಅಂಗಾತ ಬಿದ್ದಿತ್ತು. ಕೈಕಾಲುಗಳನ್ನು ಅಲ್ಲಾಡಿಸಿ ಮೇಲೇಳಲು ಭಾರೀ ಪ್ರಯತ್ನ ಪಟ್ಟು ಕೊನೆಗೆ ಬಸವಳಿದಿತ್ತು. ಇದೇ ರಸ್ತೆಯ ಮೂಲಕ ಹೋಗುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಇದರ ಸದಸ್ಯ ಪ್ರಮೋದ್ ಪೂಜಾರಿ ತೂಪಲ್ಕೆ- ಬಳೆಂಜ ಅವರು ಹಸುವಿನ ಪ್ರಾಣ ಉಳಿಸಿದ್ದಾರೆ. ಇದೇ ವೇಳೆ ಬಂದ ಇನ್ನಿಬ್ಬರು ದ್ವಿಚಕ್ರ ವಾಹನ ಸವಾರರು ಅವರಿಗೆ ಸಾತ್ ನೀಡಿದ್ದಾರೆ. ಪ್ರಮೋದ್ ಅವರ ಈ‌ ಸೇವೆಯ ವೀಡಿಯೋ ಹರಿದಾಡುತ್ತಿದ್ದು ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Related posts

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya
error: Content is protected !!