July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

ನೆರಿಯ: ಗಂಡಿಬಾಗಿಲಿನ ಸೆಂಟ್ ತೋಮಸ್ ಚರ್ಚ್ ಧರ್ಮೋಪದೇಶ ಶಾಲೆಯಲ್ಲಿ ಸುಮಾರು ಇಪ್ಪತ್ತೈದು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಜು ಚೇಟ್ಟುತಡತ್ತಿಲ್ (ಶಿಜು ಸಿ ವಿ) ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭವನ್ನು ಸೆಂಟ್ ತೋಮಸ್ ಚರ್ಚ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಚರ್ಚಿನ ಪಾಲನಾ ಸಮಿತಿಯವರು, ಬೆಳ್ತಂಗಡಿ ಧರ್ಮ ಪ್ರಾಂತ್ಯ ಬೆಳ್ಳಿ ಹಬ್ಬ ಕ್ರೀಡಾ ಸಮಿತಿ ಹಾಗೂ ಶೈಕ್ಷಣಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಚಿಂತನಾಶೀಲ ಎಸ್ರ ಫೌಂಡೇಶನ್ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶಿಜು ಸಿ ವಿ ಅವರನ್ನು ಸನ್ಮಾನಿಸಿದರು.

ಶಿಜು ಸಿ ವಿ ಎಸ್ರ ಫೌಂಡೇಶನ್ ಮುಖಾಂತರ, ಗೆಳೆಯರ ಸಹಾಯದೊಂದಿಗೆ, ಅನೇಕ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಿ ಅವರ ಬದುಕನ್ನು ಸುಧಾರಿಸುವ ಕಾರ್ಯದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ವಂದನಿಯ ಜೋಸ್ ಆಯಾಮ್ ಕುಡಿಯವರು ಶಿಜು ಸಿ ವಿ ಅವರ ಸೇವೆಯನ್ನು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿ, ಧರ್ಮೋಪದೇಶ ಶಾಲೆಯ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಜು ಪಿ ವಿ ನಡೆಸಿದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya
error: Content is protected !!