25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

ನೆರಿಯ: ಗಂಡಿಬಾಗಿಲಿನ ಸೆಂಟ್ ತೋಮಸ್ ಚರ್ಚ್ ಧರ್ಮೋಪದೇಶ ಶಾಲೆಯಲ್ಲಿ ಸುಮಾರು ಇಪ್ಪತ್ತೈದು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಜು ಚೇಟ್ಟುತಡತ್ತಿಲ್ (ಶಿಜು ಸಿ ವಿ) ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭವನ್ನು ಸೆಂಟ್ ತೋಮಸ್ ಚರ್ಚ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಚರ್ಚಿನ ಪಾಲನಾ ಸಮಿತಿಯವರು, ಬೆಳ್ತಂಗಡಿ ಧರ್ಮ ಪ್ರಾಂತ್ಯ ಬೆಳ್ಳಿ ಹಬ್ಬ ಕ್ರೀಡಾ ಸಮಿತಿ ಹಾಗೂ ಶೈಕ್ಷಣಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಚಿಂತನಾಶೀಲ ಎಸ್ರ ಫೌಂಡೇಶನ್ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶಿಜು ಸಿ ವಿ ಅವರನ್ನು ಸನ್ಮಾನಿಸಿದರು.

ಶಿಜು ಸಿ ವಿ ಎಸ್ರ ಫೌಂಡೇಶನ್ ಮುಖಾಂತರ, ಗೆಳೆಯರ ಸಹಾಯದೊಂದಿಗೆ, ಅನೇಕ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಿ ಅವರ ಬದುಕನ್ನು ಸುಧಾರಿಸುವ ಕಾರ್ಯದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ವಂದನಿಯ ಜೋಸ್ ಆಯಾಮ್ ಕುಡಿಯವರು ಶಿಜು ಸಿ ವಿ ಅವರ ಸೇವೆಯನ್ನು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿ, ಧರ್ಮೋಪದೇಶ ಶಾಲೆಯ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಜು ಪಿ ವಿ ನಡೆಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!