25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಉಪವ್ಯವಸ್ಥಾಪಕ ಸತೀಶ್ ರಾವ್, ಕೆ.ಎಮ್.ಎಫ್ ಸಹಾಯಕ ವ್ಯವಸ್ಥಾಪಕ, ಪಶು ವೈದ್ಯಾಧಿಕಾರಿ ಡಾ| ಗಣಪತಿ, ಕೆ.ಎಂ.ಎಫ್ ಕೃಷಿ ಅಧಿಕಾರಿ ಡಾ. ನಿರಂಜನ್, ಕೆ.ಎಮ್.ಎಫ್ ವಿಸ್ತರಣಾಧಿಕಾರಿಯಾದ ಯಮುನ, ಸುಚಿತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಸಿರು ಮೇವಿನ ತಳಿಗಳ ಬಗ್ಗೆ ಹಾಗೂ ಸೈಲೇಜ್ / ರಸ ಮೇವು ಉಪಯೋಗದ ಬಗ್ಗೆ ಮಾಹಿತಿ., ಜಾನುವಾರುಗಳ ಗರ್ಭಧಾರಣೆ ಸಮಸ್ಯೆಯ ಬಗ್ಗೆ, ಜಾನುವಾರುಗಳ ವಿಮೆ (ಇನ್ಶೂರೆನ್ಸ್) ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಘದ ವತಿಯಿಂದ ಹಾಲು ಹಾಕುವ ಸದಸ್ಯರ ಒಂದು ದನಕ್ಕೆ ಉಚಿತವಾಗಿ ವಿಮೆಯನ್ನು ಮಾಡಲಾಯಿತು.

ಸಂಘದಲ್ಲಿ 200ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಯತೀಶ್ ಗೌಡ ಕಂಗಿತ್ತೀಲು ಸ್ವಾಗತಿಸಿ, ಅಜಿತ್ ಕುಮಾರ್ ಅರಿಗ ಪ್ರಸ್ತಾವಿಕ ಮಾತನಾಡಿದರು., ಜಯಂತ್ ಗೌಡ ಧನ್ಯವಾದವಿತ್ತರು.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!