ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಮುಂಡಾಜೆ : “ಉತ್ತಮ ಓದುಗನಾದರೆ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ಪ್ರಪಂಚದ ಆಗುಹೋಗುಗಳನ್ನು ತಿಳಿಯಬಹುದು. ಪತ್ರಿಕಾ ಕ್ಷೇತ್ರದಲ್ಲಿ ಮೈಮರೆಯದೆ ಜಾಗೃತರಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ಪ್ರಜಾವಾಣಿಯ ಉಪಸಂಪಾದಕ ರೇವಣ್ಣ ಎಂ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಮಾಧ್ಯಮ ಕ್ಷೇತ್ರದ ಅವಕಾಶಗಳು ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸಂಜೀವ ಗೌಡ ಮಾಕಳರು, ವಹಿಸಿದ್ದರು. ಅತಿಥಿಗಳಾಗಿ ಜತ್ತನ್ನ ಗೌಡ, ನಿವೃತ ಬಿ.ಎಸ್.ಎನ್.ಎಲ್, ಉದ್ಯೋಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಸೋಮನಾಥ ಗೌಡ ಮಾಕಳ ಉಪಸ್ಥಿತರಿದ್ದರು. ಶಿಬಿರಾರ್ಥಿ ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಬಿರಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್ ಸ್ವಾಗತಿಸಿ, ಅಕ್ಷಯ ಧನ್ಯಾವಾದಗೈದರು.

Leave a Comment

error: Content is protected !!