32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

ನೆರಿಯ: ಗಂಡಿಬಾಗಿಲಿನ ಸೆಂಟ್ ತೋಮಸ್ ಚರ್ಚ್ ಧರ್ಮೋಪದೇಶ ಶಾಲೆಯಲ್ಲಿ ಸುಮಾರು ಇಪ್ಪತ್ತೈದು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಜು ಚೇಟ್ಟುತಡತ್ತಿಲ್ (ಶಿಜು ಸಿ ವಿ) ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭವನ್ನು ಸೆಂಟ್ ತೋಮಸ್ ಚರ್ಚ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಚರ್ಚಿನ ಪಾಲನಾ ಸಮಿತಿಯವರು, ಬೆಳ್ತಂಗಡಿ ಧರ್ಮ ಪ್ರಾಂತ್ಯ ಬೆಳ್ಳಿ ಹಬ್ಬ ಕ್ರೀಡಾ ಸಮಿತಿ ಹಾಗೂ ಶೈಕ್ಷಣಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಚಿಂತನಾಶೀಲ ಎಸ್ರ ಫೌಂಡೇಶನ್ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶಿಜು ಸಿ ವಿ ಅವರನ್ನು ಸನ್ಮಾನಿಸಿದರು.

ಶಿಜು ಸಿ ವಿ ಎಸ್ರ ಫೌಂಡೇಶನ್ ಮುಖಾಂತರ, ಗೆಳೆಯರ ಸಹಾಯದೊಂದಿಗೆ, ಅನೇಕ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಿ ಅವರ ಬದುಕನ್ನು ಸುಧಾರಿಸುವ ಕಾರ್ಯದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ವಂದನಿಯ ಜೋಸ್ ಆಯಾಮ್ ಕುಡಿಯವರು ಶಿಜು ಸಿ ವಿ ಅವರ ಸೇವೆಯನ್ನು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿ, ಧರ್ಮೋಪದೇಶ ಶಾಲೆಯ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಜು ಪಿ ವಿ ನಡೆಸಿದರು.

Related posts

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬಳಂಜ: ಗ್ರಾಮ ಸಭೆ

Suddi Udaya
error: Content is protected !!