April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

ನೆರಿಯ: ಗಂಡಿಬಾಗಿಲಿನ ಸೆಂಟ್ ತೋಮಸ್ ಚರ್ಚ್ ಧರ್ಮೋಪದೇಶ ಶಾಲೆಯಲ್ಲಿ ಸುಮಾರು ಇಪ್ಪತ್ತೈದು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಜು ಚೇಟ್ಟುತಡತ್ತಿಲ್ (ಶಿಜು ಸಿ ವಿ) ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭವನ್ನು ಸೆಂಟ್ ತೋಮಸ್ ಚರ್ಚ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಚರ್ಚಿನ ಪಾಲನಾ ಸಮಿತಿಯವರು, ಬೆಳ್ತಂಗಡಿ ಧರ್ಮ ಪ್ರಾಂತ್ಯ ಬೆಳ್ಳಿ ಹಬ್ಬ ಕ್ರೀಡಾ ಸಮಿತಿ ಹಾಗೂ ಶೈಕ್ಷಣಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಚಿಂತನಾಶೀಲ ಎಸ್ರ ಫೌಂಡೇಶನ್ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶಿಜು ಸಿ ವಿ ಅವರನ್ನು ಸನ್ಮಾನಿಸಿದರು.

ಶಿಜು ಸಿ ವಿ ಎಸ್ರ ಫೌಂಡೇಶನ್ ಮುಖಾಂತರ, ಗೆಳೆಯರ ಸಹಾಯದೊಂದಿಗೆ, ಅನೇಕ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಿ ಅವರ ಬದುಕನ್ನು ಸುಧಾರಿಸುವ ಕಾರ್ಯದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ವಂದನಿಯ ಜೋಸ್ ಆಯಾಮ್ ಕುಡಿಯವರು ಶಿಜು ಸಿ ವಿ ಅವರ ಸೇವೆಯನ್ನು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿ, ಧರ್ಮೋಪದೇಶ ಶಾಲೆಯ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಜು ಪಿ ವಿ ನಡೆಸಿದರು.

Related posts

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya
error: Content is protected !!