22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

ನೆರಿಯ: ಗಂಡಿಬಾಗಿಲಿನ ಸೆಂಟ್ ತೋಮಸ್ ಚರ್ಚ್ ಧರ್ಮೋಪದೇಶ ಶಾಲೆಯಲ್ಲಿ ಸುಮಾರು ಇಪ್ಪತ್ತೈದು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಜು ಚೇಟ್ಟುತಡತ್ತಿಲ್ (ಶಿಜು ಸಿ ವಿ) ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭವನ್ನು ಸೆಂಟ್ ತೋಮಸ್ ಚರ್ಚ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಚರ್ಚಿನ ಪಾಲನಾ ಸಮಿತಿಯವರು, ಬೆಳ್ತಂಗಡಿ ಧರ್ಮ ಪ್ರಾಂತ್ಯ ಬೆಳ್ಳಿ ಹಬ್ಬ ಕ್ರೀಡಾ ಸಮಿತಿ ಹಾಗೂ ಶೈಕ್ಷಣಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಚಿಂತನಾಶೀಲ ಎಸ್ರ ಫೌಂಡೇಶನ್ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶಿಜು ಸಿ ವಿ ಅವರನ್ನು ಸನ್ಮಾನಿಸಿದರು.

ಶಿಜು ಸಿ ವಿ ಎಸ್ರ ಫೌಂಡೇಶನ್ ಮುಖಾಂತರ, ಗೆಳೆಯರ ಸಹಾಯದೊಂದಿಗೆ, ಅನೇಕ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಿ ಅವರ ಬದುಕನ್ನು ಸುಧಾರಿಸುವ ಕಾರ್ಯದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ವಂದನಿಯ ಜೋಸ್ ಆಯಾಮ್ ಕುಡಿಯವರು ಶಿಜು ಸಿ ವಿ ಅವರ ಸೇವೆಯನ್ನು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿ, ಧರ್ಮೋಪದೇಶ ಶಾಲೆಯ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಜು ಪಿ ವಿ ನಡೆಸಿದರು.

Related posts

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!