July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಉಪವ್ಯವಸ್ಥಾಪಕ ಸತೀಶ್ ರಾವ್, ಕೆ.ಎಮ್.ಎಫ್ ಸಹಾಯಕ ವ್ಯವಸ್ಥಾಪಕ, ಪಶು ವೈದ್ಯಾಧಿಕಾರಿ ಡಾ| ಗಣಪತಿ, ಕೆ.ಎಂ.ಎಫ್ ಕೃಷಿ ಅಧಿಕಾರಿ ಡಾ. ನಿರಂಜನ್, ಕೆ.ಎಮ್.ಎಫ್ ವಿಸ್ತರಣಾಧಿಕಾರಿಯಾದ ಯಮುನ, ಸುಚಿತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಸಿರು ಮೇವಿನ ತಳಿಗಳ ಬಗ್ಗೆ ಹಾಗೂ ಸೈಲೇಜ್ / ರಸ ಮೇವು ಉಪಯೋಗದ ಬಗ್ಗೆ ಮಾಹಿತಿ., ಜಾನುವಾರುಗಳ ಗರ್ಭಧಾರಣೆ ಸಮಸ್ಯೆಯ ಬಗ್ಗೆ, ಜಾನುವಾರುಗಳ ವಿಮೆ (ಇನ್ಶೂರೆನ್ಸ್) ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಘದ ವತಿಯಿಂದ ಹಾಲು ಹಾಕುವ ಸದಸ್ಯರ ಒಂದು ದನಕ್ಕೆ ಉಚಿತವಾಗಿ ವಿಮೆಯನ್ನು ಮಾಡಲಾಯಿತು.

ಸಂಘದಲ್ಲಿ 200ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಯತೀಶ್ ಗೌಡ ಕಂಗಿತ್ತೀಲು ಸ್ವಾಗತಿಸಿ, ಅಜಿತ್ ಕುಮಾರ್ ಅರಿಗ ಪ್ರಸ್ತಾವಿಕ ಮಾತನಾಡಿದರು., ಜಯಂತ್ ಗೌಡ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!