25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಉಪವ್ಯವಸ್ಥಾಪಕ ಸತೀಶ್ ರಾವ್, ಕೆ.ಎಮ್.ಎಫ್ ಸಹಾಯಕ ವ್ಯವಸ್ಥಾಪಕ, ಪಶು ವೈದ್ಯಾಧಿಕಾರಿ ಡಾ| ಗಣಪತಿ, ಕೆ.ಎಂ.ಎಫ್ ಕೃಷಿ ಅಧಿಕಾರಿ ಡಾ. ನಿರಂಜನ್, ಕೆ.ಎಮ್.ಎಫ್ ವಿಸ್ತರಣಾಧಿಕಾರಿಯಾದ ಯಮುನ, ಸುಚಿತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಸಿರು ಮೇವಿನ ತಳಿಗಳ ಬಗ್ಗೆ ಹಾಗೂ ಸೈಲೇಜ್ / ರಸ ಮೇವು ಉಪಯೋಗದ ಬಗ್ಗೆ ಮಾಹಿತಿ., ಜಾನುವಾರುಗಳ ಗರ್ಭಧಾರಣೆ ಸಮಸ್ಯೆಯ ಬಗ್ಗೆ, ಜಾನುವಾರುಗಳ ವಿಮೆ (ಇನ್ಶೂರೆನ್ಸ್) ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಘದ ವತಿಯಿಂದ ಹಾಲು ಹಾಕುವ ಸದಸ್ಯರ ಒಂದು ದನಕ್ಕೆ ಉಚಿತವಾಗಿ ವಿಮೆಯನ್ನು ಮಾಡಲಾಯಿತು.

ಸಂಘದಲ್ಲಿ 200ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಯತೀಶ್ ಗೌಡ ಕಂಗಿತ್ತೀಲು ಸ್ವಾಗತಿಸಿ, ಅಜಿತ್ ಕುಮಾರ್ ಅರಿಗ ಪ್ರಸ್ತಾವಿಕ ಮಾತನಾಡಿದರು., ಜಯಂತ್ ಗೌಡ ಧನ್ಯವಾದವಿತ್ತರು.

Related posts

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya
error: Content is protected !!