September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಉಪವ್ಯವಸ್ಥಾಪಕ ಸತೀಶ್ ರಾವ್, ಕೆ.ಎಮ್.ಎಫ್ ಸಹಾಯಕ ವ್ಯವಸ್ಥಾಪಕ, ಪಶು ವೈದ್ಯಾಧಿಕಾರಿ ಡಾ| ಗಣಪತಿ, ಕೆ.ಎಂ.ಎಫ್ ಕೃಷಿ ಅಧಿಕಾರಿ ಡಾ. ನಿರಂಜನ್, ಕೆ.ಎಮ್.ಎಫ್ ವಿಸ್ತರಣಾಧಿಕಾರಿಯಾದ ಯಮುನ, ಸುಚಿತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಸಿರು ಮೇವಿನ ತಳಿಗಳ ಬಗ್ಗೆ ಹಾಗೂ ಸೈಲೇಜ್ / ರಸ ಮೇವು ಉಪಯೋಗದ ಬಗ್ಗೆ ಮಾಹಿತಿ., ಜಾನುವಾರುಗಳ ಗರ್ಭಧಾರಣೆ ಸಮಸ್ಯೆಯ ಬಗ್ಗೆ, ಜಾನುವಾರುಗಳ ವಿಮೆ (ಇನ್ಶೂರೆನ್ಸ್) ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಘದ ವತಿಯಿಂದ ಹಾಲು ಹಾಕುವ ಸದಸ್ಯರ ಒಂದು ದನಕ್ಕೆ ಉಚಿತವಾಗಿ ವಿಮೆಯನ್ನು ಮಾಡಲಾಯಿತು.

ಸಂಘದಲ್ಲಿ 200ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಯತೀಶ್ ಗೌಡ ಕಂಗಿತ್ತೀಲು ಸ್ವಾಗತಿಸಿ, ಅಜಿತ್ ಕುಮಾರ್ ಅರಿಗ ಪ್ರಸ್ತಾವಿಕ ಮಾತನಾಡಿದರು., ಜಯಂತ್ ಗೌಡ ಧನ್ಯವಾದವಿತ್ತರು.

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya
error: Content is protected !!