23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಉಪವ್ಯವಸ್ಥಾಪಕ ಸತೀಶ್ ರಾವ್, ಕೆ.ಎಮ್.ಎಫ್ ಸಹಾಯಕ ವ್ಯವಸ್ಥಾಪಕ, ಪಶು ವೈದ್ಯಾಧಿಕಾರಿ ಡಾ| ಗಣಪತಿ, ಕೆ.ಎಂ.ಎಫ್ ಕೃಷಿ ಅಧಿಕಾರಿ ಡಾ. ನಿರಂಜನ್, ಕೆ.ಎಮ್.ಎಫ್ ವಿಸ್ತರಣಾಧಿಕಾರಿಯಾದ ಯಮುನ, ಸುಚಿತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಸಿರು ಮೇವಿನ ತಳಿಗಳ ಬಗ್ಗೆ ಹಾಗೂ ಸೈಲೇಜ್ / ರಸ ಮೇವು ಉಪಯೋಗದ ಬಗ್ಗೆ ಮಾಹಿತಿ., ಜಾನುವಾರುಗಳ ಗರ್ಭಧಾರಣೆ ಸಮಸ್ಯೆಯ ಬಗ್ಗೆ, ಜಾನುವಾರುಗಳ ವಿಮೆ (ಇನ್ಶೂರೆನ್ಸ್) ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಘದ ವತಿಯಿಂದ ಹಾಲು ಹಾಕುವ ಸದಸ್ಯರ ಒಂದು ದನಕ್ಕೆ ಉಚಿತವಾಗಿ ವಿಮೆಯನ್ನು ಮಾಡಲಾಯಿತು.

ಸಂಘದಲ್ಲಿ 200ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಯತೀಶ್ ಗೌಡ ಕಂಗಿತ್ತೀಲು ಸ್ವಾಗತಿಸಿ, ಅಜಿತ್ ಕುಮಾರ್ ಅರಿಗ ಪ್ರಸ್ತಾವಿಕ ಮಾತನಾಡಿದರು., ಜಯಂತ್ ಗೌಡ ಧನ್ಯವಾದವಿತ್ತರು.

Related posts

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!