25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಉಪವ್ಯವಸ್ಥಾಪಕ ಸತೀಶ್ ರಾವ್, ಕೆ.ಎಮ್.ಎಫ್ ಸಹಾಯಕ ವ್ಯವಸ್ಥಾಪಕ, ಪಶು ವೈದ್ಯಾಧಿಕಾರಿ ಡಾ| ಗಣಪತಿ, ಕೆ.ಎಂ.ಎಫ್ ಕೃಷಿ ಅಧಿಕಾರಿ ಡಾ. ನಿರಂಜನ್, ಕೆ.ಎಮ್.ಎಫ್ ವಿಸ್ತರಣಾಧಿಕಾರಿಯಾದ ಯಮುನ, ಸುಚಿತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಸಿರು ಮೇವಿನ ತಳಿಗಳ ಬಗ್ಗೆ ಹಾಗೂ ಸೈಲೇಜ್ / ರಸ ಮೇವು ಉಪಯೋಗದ ಬಗ್ಗೆ ಮಾಹಿತಿ., ಜಾನುವಾರುಗಳ ಗರ್ಭಧಾರಣೆ ಸಮಸ್ಯೆಯ ಬಗ್ಗೆ, ಜಾನುವಾರುಗಳ ವಿಮೆ (ಇನ್ಶೂರೆನ್ಸ್) ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಘದ ವತಿಯಿಂದ ಹಾಲು ಹಾಕುವ ಸದಸ್ಯರ ಒಂದು ದನಕ್ಕೆ ಉಚಿತವಾಗಿ ವಿಮೆಯನ್ನು ಮಾಡಲಾಯಿತು.

ಸಂಘದಲ್ಲಿ 200ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಯತೀಶ್ ಗೌಡ ಕಂಗಿತ್ತೀಲು ಸ್ವಾಗತಿಸಿ, ಅಜಿತ್ ಕುಮಾರ್ ಅರಿಗ ಪ್ರಸ್ತಾವಿಕ ಮಾತನಾಡಿದರು., ಜಯಂತ್ ಗೌಡ ಧನ್ಯವಾದವಿತ್ತರು.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಮೇ 15: ವಿದ್ಯುತ್ ನಿಲುಗಡೆ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!