22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ವರ್ಷಕ್ಕೆ 2 ಬಾರಿ ಚಿನ್ನೋತ್ಸವ ಪ್ರಾರಂಭಿಸುತ್ತೇವೆ. ಬೆಳ್ತಂಗಡಿ ಚಿನ್ನದಂತ ಊರು. ಮುಳಿಯ ಸಂಸ್ಥೆ ಆರು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಾಗ ನಮ್ಮನ್ನು ಅತ್ಯಂತ ಗೌರವದಿಂದ ಕಂಡ ಊರು.‌ ಇಲ್ಲಿಯ ಜನರು ಅತ್ಯಂತ ಸಾತ್ವಿಕ ಮನಸ್ಸಿನವರು ಎಂದು ಮುಳಿಯ ಮಾರ್ಕೇಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಹೇಳಿದರು.

ಅವರು ಬೆಳ್ತಂಗಡಿ ಮುಳಿಯ ಚಿನ್ನೋತ್ಸವಕ್ಕೆ ಅ.7 ರಂದು ಚಾಲನೆ ನೀಡಿ ಮಾತನಾಡಿದರು.

80 ವರ್ಷಗಳ ಪರಂಪರೆಯಲ್ಲಿ ಮುಳಿಯ ಚಿನ್ನಾಭರಣಗಳಲ್ಲಿ ಶುದ್ಧತೆಯನ್ನು ಕಾಪಾಡಿಗೊಂಡು ಬಂದಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ಸಂಸ್ಥೆ ಎತ್ತರಕ್ಕೆ ಬೆಳೆದಿದೆ. ವಿನೂತನ ಮತ್ತು ವಿಶಿಷ್ಠವಾದ ಡಿಸೈನ್ ನಮ್ಮಲ್ಲಿದ್ದು ಗ್ರಾಹಕರು ತಮ್ಮ ಇಷ್ಟದ ಚಿನ್ನಾಭರಣ ಪಡೆಯಬಹುದು ಎಂದರು.

ತಾ.ಪಂ‌ ತರಭೇತಿ ಸಂಯೋಜಕಿ, ಸಂಪನ್ಮೂಲ ವ್ಯಕ್ತಿ ಸುಧಾಮಣಿ ಮಾತನಾಡಿ ಮುಳಿಯದಲ್ಲಿ ಮನೆಯ ವಾತವರಣ ಕಂಡಿದ್ದೇವೆ. ಇಲ್ಲಿ ಬರುವಾಗ ನಗುಮೊಗದ ಸೇವೆಯೊಂದಿಗೆ ಸ್ವಾಗತಿಸಿ ಸತ್ಕಾರ ನೀಡುವುದು ಬಹಳ ಅದ್ಬುತವಾಗಿದೆ. ಎಲ್ಲಿಯೂ ಸಿಗದ ಡಿಸೈನ್ ಮುಳಿಯದಲ್ಲಿ ಸಿಗುತ್ತದೆ. ಹೆಣ್ಮಕ್ಕಳಿಗೆ ಚಿನ್ನ ಇಷ್ಟ, ಸ್ಕೀಮ್ ಮಾಡಿದ್ದು ಗ್ರಾಹಕರಿಗೆ ಪ್ರಯೋಜನವಾಗಿದೆ. ಸಂಸ್ಥೆ ವ್ಯಾಪರದೊಂದಿಗೆ ಧಾರ್ಮಿಕ ಆಚರಣೆಗಳನ್ನು ಆಚರಿಸಿ, ಸಮಾಜಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡುತ್ತಿದೆ. ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮುಳಿಯ ಅಂತರಾಷ್ಟ್ರೀಯ ಮಟ್ಟದಲ್ಲಿ‌ ಬೆಳೆಯಲಿ ಎಂದರು.

ಮೂಡಬಿದ್ರೆ ಜೈನ್ ಕಾಲೇಜಿನ ಶಾರ್ವರಿ ಜೈನ್ ಮಾತನಾಡಿ ಮುಳಿಯ ಸಿಬ್ಬಂದಿಗಳ ಸೇವೆ ಅದ್ಬುತವಾಗಿದೆ. ಎಲ್ಲಾ ಹಬ್ಬಗಳನ್ನು ಆಚರಿಸಿ ಸಂಸ್ಥೆಯು ಮಾದರಿಯಾಗಿದೆ. ಚಿನ್ನಾಭರಣದಲ್ಲಿ ತುಂಬ ಕಲೆಕ್ಷನ್ ಇದ್ದು ಗ್ರಾಹಕರು ಚಿನ್ನೋತ್ಸವದಲ್ಲಿ ಭಾಗವಹಿಸಿ ಎಂದರು.

ವೇದಿಕೆಯಲ್ಲಿ ಮುಳಿಯ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಶಿವಕುಮಾರ್ ಉಪಸ್ಥಿತರಿದ್ದರು. ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಮ್ಯಾನೇಜರ್ ಲೋಹಿತ್ ಕುಮಾರ್ ಸ್ವಾಗತಿಸಿದರು. ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು. ಮುಳಿಯದ ಉಪ ವ್ಯವಸ್ಥಾಪಕ ದಿನೇಶ್ ವಂದಿಸಿದರು.


ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೊತ್ಸವ ಹಬ್ಬದಲ್ಲಿ ಭಾಗವಹಿಸಿ ನೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಪಡೆಯಬಹುದಾಗಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:

ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya
error: Content is protected !!