23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

ಮುಂಡಾಜೆ : “ಉತ್ತಮ ಓದುಗನಾದರೆ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ಪ್ರಪಂಚದ ಆಗುಹೋಗುಗಳನ್ನು ತಿಳಿಯಬಹುದು. ಪತ್ರಿಕಾ ಕ್ಷೇತ್ರದಲ್ಲಿ ಮೈಮರೆಯದೆ ಜಾಗೃತರಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ಪ್ರಜಾವಾಣಿಯ ಉಪಸಂಪಾದಕ ರೇವಣ್ಣ ಎಂ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಮಾಧ್ಯಮ ಕ್ಷೇತ್ರದ ಅವಕಾಶಗಳು ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸಂಜೀವ ಗೌಡ ಮಾಕಳರು, ವಹಿಸಿದ್ದರು. ಅತಿಥಿಗಳಾಗಿ ಜತ್ತನ್ನ ಗೌಡ, ನಿವೃತ ಬಿ.ಎಸ್.ಎನ್.ಎಲ್, ಉದ್ಯೋಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಸೋಮನಾಥ ಗೌಡ ಮಾಕಳ ಉಪಸ್ಥಿತರಿದ್ದರು. ಶಿಬಿರಾರ್ಥಿ ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಬಿರಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್ ಸ್ವಾಗತಿಸಿ, ಅಕ್ಷಯ ಧನ್ಯಾವಾದಗೈದರು.

Related posts

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya
error: Content is protected !!