ಉಜಿರೆ : 2024-25ನೇ ಸಾಲಿನ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ಚರ್ಚಾ ಸ್ಪರ್ಧೆ- ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವವಾದುದಾಗಿದೆ ಎಂಬ ವಿಷಯದಲ್ಲಿ ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿಗಳಾದ ದೀಕ್ಷಿತ್ ಎಂ ಹಾಗೂ ಫಾತಿಮಾತ್ ರಾಫಿಯಾ ಭಾಗವಹಿಸಿದ್ದು, ಫಾತಿಮಾತ್ ರಾಫಿಯಾ ರವರು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭವನ್ನು ಹಾರೈಸಿರುತ್ತಾರೆ.