ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಇಳಂತಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (ರಿ.) ಬಿ.ಸಿ. ಟ್ರಸ್ಟ್ ಗುರುವಾಯನಕೆರೆ. ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ ಅ 06 ರಂದು ವಾಣಿಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ವಕೀಲರು ಸುಬ್ರಹ್ಮಣ್ಯ ಅಗರ್ತ ನೆರವೇರಿಸಿದರು. ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಬಾಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾಧಿಕಾರಿ ದಯಾನಂದ ಪೂಜಾರಿ, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಪ್ರಪುಲ್ಲ ಚಂದ್ರ, ಕಣಿಯೂರು ವಲಯದ ವಲಯಾಧ್ಯಕ್ಷ ರಮಾನಂದ ಪೂಜಾರಿ ಉಪಸ್ಥಿತರಿದ್ದರು.

ಈ ವೇಳೆ ನೂತನ ಅಧ್ಯಕ್ಷರಾಗಿ ಮೋಹನ ಶೆಟ್ಟಿ, ದಯಾನಂದ, ಇಲಂತಿಲ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಶಂಕರ ಭಟ್, ವಾಣಿಶ್ರೀ ಭಜನಾ ಮಂದಿರದ ಅಧ್ಯಕ್ಷ ಹರೀಶ್ ಪೊಟ್ಟುಕೆರೆ ಆಯ್ಕೆಯಾದರು.

Leave a Comment

error: Content is protected !!